ಮಡಿಕೇರಿಯಲ್ಲಿ ಮಳೆ ಅಬ್ಬರ; ಜು.12ರವರೆಗೆ ರಾಜಾಸೀಟ್ ಉದ್ಯಾನವನಕ್ಕೆ ಪ್ರವಾಸಿಗರಿಗಿಲ್ಲ ಎಂಟ್ರಿ
ಮಡಿಕೇರಿ: ಕೊಡಗಿನಲ್ಲಿ (Kodagu) ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ಮಡಿಕೇರಿಯ (Madikeri) ಪ್ರಸಿದ್ಧ ರಾಜಾಸೀಟ್ ಉದ್ಯಾನವನಕ್ಕೆ (Rajaseat Garden) ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಜುಲೈ 9ರಿಂದ ಜುಲೈ 12ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಸ

ಮಡಿಕೇರಿ: ಕೊಡಗಿನಲ್ಲಿ (Kodagu) ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ಮಡಿಕೇರಿಯ (Madikeri) ಪ್ರಸಿದ್ಧ ರಾಜಾಸೀಟ್ ಉದ್ಯಾನವನಕ್ಕೆ (Rajaseat Garden) ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಜುಲೈ 9ರಿಂದ ಜುಲೈ 12ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಮಡಿಕೇರಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಭೂ ಕುಸಿತ ಉಂಟಾಗಿದೆ. ಇದರಿಂದ ವಾಹನ ಸಂಚಾರವನ್ನು ರಾಜಾಸೀಟ್ ರಸ್ತೆಯ ಮೂಲಕ ತಿರುಗಿಸಲಾಗಿದೆ. ಪರಿಣಾಮ ಈ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ. ರಾಜಾಸೀಟ್ ಬಳಿ ಪ್ರವಾಸಿಗರು ವಾಹನ ನಿಲ್ಲಿಸುತ್ತಿರುವುದರಿಂದ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ವಾರಾಂತ್ಯದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುವ ಆತಂಕ ವ್ಯಕ್ತವಾಗಿದೆ.ಇದನ್ನೂ ಓದಿ: ದೆಹಲಿಯ ರೋಹಿಣಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ – ಹಲವರು ಸಿಲುಕಿರುವ ಶಂಕೆ ಇದೇ ರಸ್ತೆಯಲ್ಲಿ ಶಾಲೆಯೂ ಇರುವುದರಿಂದ ವಾಹನ ದಟ್ಟಣೆಯಿಂದ ಶಾಲಾ ಮಕ್ಕಳಿಗೂ ತೊಂದರೆ ಆಗುವ ಸಾಧ್ಯತೆ ಇದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರದ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಜುಲೈ 9 ರಿಂದ 12ರವರೆಗೆ ರಾಜಾಸೀಟ್ ಬಳಿ ವಾಹನ ನಿಲುಗಡೆ ಹಾಗೂ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ. ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.ಇದನ್ನೂ ಓದಿ: ಅಯೋಧ್ಯೆ, ಬದರಿನಾಥ ಬಳಿಕ ಬಾಗಲಾಮುಖಿ ದೇವಾಲಯದಲ್ಲೂ ಕಾಣಿಕೆ ದುರ್ಬಳಕೆ ಆರೋಪ