ದೇವೇಗೌಡರ ಪ್ರತಿ ಯಶಸ್ಸಿನ ಹಿಂದೆ ನಿಂತಿದ್ದವರು ಚೆನ್ನಮ್ಮ – ಸಿಎಂ ಡಿಕೆಶಿ ತೀವ್ರ ಸಂತಾಪ
ಬೆಂಗಳೂರು: ಮಾತೃ ಸ್ವರೂಪಿ ಚೆನ್ನಮ್ಮ ದೇವೇಗೌಡ (Chennamma DeveGowda) ಅವರ ನಿಧನಕ್ಕೆ ಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅವರು ತೀವ್ರ ಸಂತಾಪ ಸೂಚಿಸಿದರು. ಅಪಾರ ಧೈವಭಕ್ತೆಯಾಗಿದ್ದ ಚನ್ನಮ್ಮನವರು ತುಂಬು ಕುಟುಂಬವನ್ನ ಸಾಕಿ ಸಲಹಿದ ಮಹಾನ್ ತಾಯಿ. ದೇವೇಗೌಡರು, ಕುಮಾರಸ್ವಾಮಿ, ರೇವಣ್ಣ ಸೇರಿದಂತೆ ಅವರ ಕುಟುಂಬ ಸದಸ್ಯರ ರಾಜಕೀಯ ಮತ್ತು ಬದುಕಿನ ಏಳ್ಗೆಯ ಹಿ

ಬೆಂಗಳೂರು: ಮಾತೃ ಸ್ವರೂಪಿ ಚೆನ್ನಮ್ಮ ದೇವೇಗೌಡ (Chennamma DeveGowda) ಅವರ ನಿಧನಕ್ಕೆ ಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅವರು ತೀವ್ರ ಸಂತಾಪ ಸೂಚಿಸಿದರು. ಅಪಾರ ಧೈವಭಕ್ತೆಯಾಗಿದ್ದ ಚನ್ನಮ್ಮನವರು ತುಂಬು ಕುಟುಂಬವನ್ನ ಸಾಕಿ ಸಲಹಿದ ಮಹಾನ್ ತಾಯಿ. ದೇವೇಗೌಡರು, ಕುಮಾರಸ್ವಾಮಿ, ರೇವಣ್ಣ ಸೇರಿದಂತೆ ಅವರ ಕುಟುಂಬ ಸದಸ್ಯರ ರಾಜಕೀಯ ಮತ್ತು ಬದುಕಿನ ಏಳ್ಗೆಯ ಹಿಂದೆ ಚನ್ನಮ್ಮನವರ ಪರಿಶ್ರಮ ಅಡಗಿದೆ. ಅವರು ಆಸ್ಪತ್ರೆಯಿಂದ ಗುಣಮುಖರಾಗಿ ವಾಪಸ್ ಬರುತ್ತಾರೆ ಎಂದು ಎಲ್ಲರೂ ನಂಬಿಕೆ ಇಟ್ಟಿದ್ದರು. ಆ ನಂಬಿಕೆ ಸುಳ್ಳಾಗಿರುವುದಕ್ಕೆ ಬಹಳ ಬೇಸರವಾಗಿದೆ ಎಂದು ದುಃಖತಪ್ತರಾದರು. ಇದನ್ನೂ ಓದಿ: ಗ್ರಾಮೀಣ ಸಂಸ್ಕೃತಿಯಲ್ಲಿ ಬೆಳೆದ ಸರಳ ಸ್ವಭಾವದ ಮಹಿಳೆ – ಶಿಸ್ತು, ಸಂಪ್ರದಾಯಗಳಿಗೆ ಆದ್ಯತೆ ನೀಡುತ್ತಿದ್ದ ಚೆನ್ನಮ್ಮ ಯಶಸ್ವಿ ಪುರುಷನ ಹಿಂದೆ ಮಹಿಳೆ ಇದ್ದೇ ಇರುತ್ತಾಳೆ ಎನ್ನುತ್ತಾರೆ. ದೇವೇಗೌಡರ (HD DeveGowda) ಪ್ರತಿ ಯಶಸ್ಸಿನ ಹಿಂದೆ ನಿಂತಿದ್ದವರು. ಅವರ ಕುಟುಂಬ ಸದಸ್ಯರು ಸೋತಾಗ ಕುಗ್ಗಲಿಲ್ಲ, ಗೆದ್ದಾಗ ಹಿಗ್ಗಲಿಲ್ಲ. ರಾಜಕೀಯದ ಏಳು-ಬೀಳುಗಳಲ್ಲಿ ದೇವೇಗೌಡರಿಗೆ ಬೆನ್ನೆಲುಬಾಗಿ ನಿಂತವರು ಚೆನ್ನಮ್ಮ. ಮನೆಯನ್ನು ಜವಾಬ್ದಾರಿಯಿಂದ ನೋಡಿಕೊಳ್ಳುವ ಮೂಲಕ ಅವರು ಗೌಡರ ಬದುಕಿನ ನಿಜವಾದ ಶಕ್ತಿಯಾಗಿದ್ದರು. ಮೌನದಿಂದಲೇ ಇಡೀ ಕುಟುಂಬದ ನಿರ್ವಹಣೆ ಮಾಡಿದವರು. ಯಾವುದೇ ಪ್ರಚಾರ ಬಯಸದೆ, ತೆರೆಮರೆಯಲ್ಲಿ ಇದ್ದವರು ಎಂದು ಸ್ಮರಿಸಿದರು. ಇಳಿ ವಯಸ್ಸಿನಲ್ಲಿ ಪತ್ನಿಯ ಅಗಲಿಕೆ ದೇವೇಗೌಡರಿಗೆ ಹಾಗೂ ಅವರ ಕುಟುಂಬ ವರ್ಗದವರಿಗೆ ನೋವು ತರುವುದರ ಜತೆಗೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ಅವರ ಕುಟುಂಬವರ್ಗ, ಬಂಧುಗಳು ಹಾಗೂ ಹಿತೈಷಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ದೇವೇಗೌಡರ ತಮ್ಮನ ಮಗನಿಂದಲೇ ಆ್ಯಸಿಡ್ ದಾಳಿ; 2 ಬಾರಿ ಸಾವು ಗೆದ್ದು ಬಂದಿದ್ದ ಚೆನ್ನಮ್ಮ