ಬದರಿನಾಥದಲ್ಲಿ ದೇಣಿಗೆ ಕಳ್ಳತನ ಕೇಸ್ – ಸಿಸಿಟಿವಿಯಲ್ಲಿ ಬಯಲಾಯ್ತು ಕೃತ್ಯ; ಕೇಸರಿ ವಸ್ತ್ರವನ್ನೂ ಬಿಡದ ಆರೋಪಿಗಳು
ಡೆಹ್ರಾಡೂನ್: ಬದರಿನಾಥ ದೇಗುಲದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ಕಳವು ಪ್ರಕರಣಕ್ಕೆ (Badrinath Donation Theft Case) ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಮತ್ತೋರ್ವ ಆರೋಪಿಯನ್ನ ಬಂಧಿಸಿದೆ. ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಈಗ 2ಕ್ಕೆ ಏರಿಕೆಯಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ದೂರು ದಾಖಲಾದ ಬಳಿಕ ಬದರಿನಾಥ ಪೊಲೀಸ್ ಠಾಣೆಯಲ್ಲಿ (Badrinath Police Stat

ಡೆಹ್ರಾಡೂನ್: ಬದರಿನಾಥ ದೇಗುಲದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ಕಳವು ಪ್ರಕರಣಕ್ಕೆ (Badrinath Donation Theft Case) ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಮತ್ತೋರ್ವ ಆರೋಪಿಯನ್ನ ಬಂಧಿಸಿದೆ. ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಈಗ 2ಕ್ಕೆ ಏರಿಕೆಯಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ದೂರು ದಾಖಲಾದ ಬಳಿಕ ಬದರಿನಾಥ ಪೊಲೀಸ್ ಠಾಣೆಯಲ್ಲಿ (Badrinath Police Station) ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಲಾಗಿತ್ತು. ಪ್ರಾಥಮಿಕ ತನಿಖೆ ಮತ್ತು ಲಭ್ಯವಿದ್ದ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಪ್ರಮೋದ್ ನೌಟಿಯಾಲ್ನನ್ನ ಜುಲೈ 12ರಂದು ಬಂಧಿಸಲಾಗಿದ್ದು, ಪ್ರಸ್ತುತ ಆರೋಪಿಯನ್ನ ನ್ಯಾಯಾಂಗ ಬಂಧನದಲ್ಲಿಡಲಾಗಿದೆ. ಬಳಿಕ ವಿಶೇಷ ತನಿಖಾ ತಂಡವು (SIT) ಥಾಲಿ ಭೇಂಟ್ ಎಣಿಕೆ ಕೊಠಡಿಯ ಸಿಸಿಟಿವಿ ದೃಶ್ಯಗಳನ್ನ ಸೂಕ್ಷ್ಮವಾಗಿ ಪರಿಶೀಲಿಸಿ, ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿದೆ. ಈ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ಸ್ಫೋಟಕ ರಹಸ್ಯಗಳು ಬೆಳಕಿಗೆ ಬಂದಿವೆ. ತನಿಖೆಯಲ್ಲಿ, ಬದರಿನಾಥ – ಕೇದಾರನಾಥ ದೇವಸ್ಥಾನ ಸಮಿತಿ (BKTC)ಯ ಖಾಯಂ ಸಿಬ್ಬಂದಿಯಾಗಿದ್ದ ಹಾಗೂ ಆಗ ದೇವಾಲಯದ ಅಧಿಕಾರಿಯಾಗಿ, ಕಾಣಿಕೆ ಎಣಿಕೆ ಪ್ರಕ್ರಿಯೆಯ ಉಸ್ತುವಾರಿ ವಹಿಸಿಕೊಂಡಿದ್ದ ರಾಜೇಂದ್ರ ಚೌಹಾಣ್, ಪ್ರಮೋದ್ ನೌಟಿಯಾಲ್ ಜೊತೆಗೂಡಿ ಈ ಕೃತ್ಯ ನಡೆಸಿರುವುದು ಕಂಡುಬಂದಿದೆ. ಕಾಣಿಕೆ ಎಣಿಕೆ ವೇಳೆ ಬಂದಿದ್ದ ನಗದು ಮತ್ತು ಇತರೆ ಕಾಣಿಕೆಗಳ ಒಂದು ಭಾಗವನ್ನು ಅಕ್ರಮವಾಗಿ ದುರುಪಯೋಗ ಪಡಿಸಿಕೊಂಡಿದ್ದಾರೆ. ಅಲ್ಲಿದ್ದ ಕೇಸರಿ ವಸ್ತ್ರವನ್ನೂ ಆರೋಪಿಗಳು ಬಿಟ್ಟಿಲ್ಲ ಅನ್ನೋ ಸಂಗತಿ ಬಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಕಾಣಿಕೆಗಳ ದುರುಪಯೋಗದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ವಿಶೇಷ ತನಿಖಾ ತಂಡ ಹೆಚ್ಚಿನ ವಿಚಾರಣೆ ನಡೆಸುತ್ತಿದೆ.