ಮನೆ ಬಾಗಿಲಿಗೇ ಶಾಶ್ವತ ನಿವಾಸ ಪತ್ರ, ಜಾತಿ ಪ್ರಮಾಣ ಪತ್ರ ತಲುಪಿಸುವ ಕಾರ್ಯಕ್ರಮಕ್ಕೆ ಸಿಎಂ ಡಿಕೆಶಿ ಚಾಲನೆ
– ನಾಳೆಯಿಂದಲೇ ಪ್ರಮಾಣ ಪತ್ರ ಕೊಡಲು ಸರ್ಕಾರ ಸಿದ್ಧತೆ; ಅರ್ಜಿ ಎಲ್ಲಿ ಪಡೆಯಬೇಕು? ಬೆಂಗಳೂರು: ವಿರೋಧದ ನಡುವೆಯೇ ರಾಜ್ಯದಲ್ಲಿ ಶಾಶ್ವತ ನಿವಾಸ ಪ್ರಮಾಣ ಪತ್ರ (Permanent Residence Certificate) ಕೊಡಲು ರಾಜ್ಯ ಸರ್ಕಾರ ಮುಂದಾಗಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಶ್ವತ ನಿವಾಸ ಪತ್ರ ಮತ್ತು ಜಾತಿ ಪ್ರಮಾಣ ಪತ್ರ ಮನೆ ಮನೆಗೆ ತಲುಪಿ

– ನಾಳೆಯಿಂದಲೇ ಪ್ರಮಾಣ ಪತ್ರ ಕೊಡಲು ಸರ್ಕಾರ ಸಿದ್ಧತೆ; ಅರ್ಜಿ ಎಲ್ಲಿ ಪಡೆಯಬೇಕು? ಬೆಂಗಳೂರು: ವಿರೋಧದ ನಡುವೆಯೇ ರಾಜ್ಯದಲ್ಲಿ ಶಾಶ್ವತ ನಿವಾಸ ಪ್ರಮಾಣ ಪತ್ರ (Permanent Residence Certificate) ಕೊಡಲು ರಾಜ್ಯ ಸರ್ಕಾರ ಮುಂದಾಗಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಶ್ವತ ನಿವಾಸ ಪತ್ರ ಮತ್ತು ಜಾತಿ ಪ್ರಮಾಣ ಪತ್ರ ಮನೆ ಮನೆಗೆ ತಲುಪಿಸುವ ಕಾರ್ಯಕ್ರಮಕ್ಕೆ ಸಿಎಂ ಡಿಕೆ ಶಿವಕುಮಾರ್ (DK Shivakumar) ಮತ್ತು ಡಿಸಿಎಂ ಪರಮೇಶ್ವರ್ ಚಾಲನೆ ನೀಡಿದ್ರು. ಕಚೇರಿ ಅಲೆದಾಟ ತಪ್ಪಿತು; ಜಾತಿ, ನಿವಾಸಿ ಪ್ರಮಾಣಪತ್ರ ಮನೆ ಬಾಗಿಲಿಗೆ ಬಂತು! ರಾಜ್ಯದಲ್ಲಿ ಮನೆ ಮನೆಗೆ ತೆರಳಿ ಉಚಿತವಾಗಿ ಜಾತಿ ಹಾಗೂ ಶಾಶ್ವತ ನಿವಾಸಿ ಪ್ರಮಾಣಪತ್ರ ವಿತರಿಸುವ ಸೇವೆಗೆ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ, ಸರ್ಕಾರದ ಮುಖ್ಯ… pic.twitter.com/0v0dKMDSMJ — DK Shivakumar (@DKShivakumar) July 20, 2026 ನಾಳೆಯಿಂದಲೇ ಶಾಶ್ವತ ನಿವಾಸ ಪ್ರಮಾಣ ಪತ್ರ ಕೊಡಲು ಸರ್ಕಾರ ಸಿದ್ದತೆ ಮಾಡಿಕೊಂಡಿದೆ. ಈಗಾಗಲೇ 4.85 ಕೋಟಿ ಕುಟುಂಬಗಳ ಪತ್ರಗಳನ್ನ ಡಿಸಿಗಳಿಗೆ ಸರ್ಕಾರ ರವಾನೆ ಮಾಡಿದೆ. ಸಾರ್ವಜನಿಕರು ಅರ್ಜಿ ಹಾಕಿದ ಕೂಡಲೇ ಮನೆ ಮನೆಗೆ ತೆರಳಿ ಜಾತಿ ಪ್ರಮಾಣ ಪತ್ರ (Caste Certificates) ಮತ್ತು ಶಾಶ್ವತ ನಿವಾಸ ಪತ್ರ ನೀಡಲಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಕರ್ನಾಟಕ ರಾಜ್ಯ ಬದುಕು ಕಟ್ಟಿಕೊಳ್ಳುವವ ಪ್ರತಿಯೊಬ್ಬರಿಗೂ ಮೂಲ ಸೌಕರ್ಯ ಒದಗಿಸಿಕೊಟ್ಟು ಅವರ ಹಕ್ಕು ಸಂರಕ್ಷಿಸಲು ಸದಾ ಮುಂಚೂಣಿಯಲ್ಲಿರುವ ರಾಜ್ಯ. ಎಸ್ ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮನೆ ಬಾಗಿಲಿಗೆ ಪಹಣಿ ನೀಡುವ ಮೂಲಕ ಹೊಸ ಹೆಜ್ಜೆ ಇಟ್ಟಿತ್ತು. ನಾನು ಮುಖ್ಯಮಂತ್ರಿಯಾಗುವ ಮುನ್ನ ಹಾಗೂ ನಂತರವೂ ನಿಮ್ಮ ಮತ ನಿಮ್ಮ ಹಕ್ಕು, ನಿಮ್ಮ ಮತ – ನಿಮ್ಮ ಬದುಕು ಇದಕ್ಕೆ ನಮ್ಮ ಸರ್ಕಾರ ಗ್ಯಾರಂಟಿ ಎನ್ನುವುದು ನಮ್ಮ ಮಂತ್ರ ಹಾಗೂ ತತ್ವವಾಗಿದೆ ಎಂದರು. ಭಾರತದಲ್ಲಿಯೇ ಶಾಶ್ವತವಾದ ಪ್ರಮಾಣ ಪತ್ರವನ್ನು ಉಚಿತವಾಗಿ ಮನೆ ಮನೆಗೆ ತೆರಳಿ ಪ್ರಮಾಣ ಪತ್ರವನ್ನು ನೀಡಲಾಗುವ ಐತಿಹಾಸಿಕ ಅಭಿಯಾನವನ್ನ ಸರ್ಕಾರ ಕೈಗೊಂಡಿದೆ. ಮತದಾರರ ಪಟ್ಟಿಗೆ ಸೇರಲು ಚುನಾವಣಾ ಆಯೋಗ ಸೂಚಿಸಿರುವ 11 ದಾಖಲೆಗಳಲ್ಲಿ ಒಂದಾದ ಶಾಶ್ವತ ನಿವಾಸ ಪ್ರಮಾಣ ಪತ್ರವನ್ನ ನೀಡುವ ಐತಿಹಾಸಿಕ ಕಾರ್ಯಕ್ರಮವನ್ನು ಕೈಗೊಂಡಿದೆ ಎಂದು ತಿಳಿಸಿದರು. ದೇಶದಲ್ಲಿಯೇ 4.85 ಕೋಟಿ ಕುಟುಂಬಗಳಿಗೆ ಈ ದಾಖಲೆ ಮನೆಗೆ ತಲುಪಿಸುವ ಕಾರ್ಯ ಕೈಗೊಂಡ ಪ್ರಥಮ ರಾಜ್ಯ ಕರ್ನಾಟಕವಾಗಿದೆ ಎನ್ನುವುದು ನಮ್ಮ ಹೆಮ್ಮೆ. ಚುನಾವಣಾ ಆಯೋಗ ಸೂಚಿಸಿರುವ ಕ್ರಮಗಳನ್ನ ಚಾಚೂ ತಪ್ಪದೇ ಸರ್ಕಾರ ಪಾಲಿಸುತ್ತಿದೆ. ರಾಜ್ಯದ ನಿವಾಸಿಗಳಿಗೆ ಅಗತ್ಯವಿರುವ ಪ್ರಮಾಣಪತ್ರಗಳನ್ನ ನೀಡುವುದು ರಾಜ್ಯ ಸರ್ಕಾರದ ಹೊಣೆಗಾರಿಕೆ. ಇದನ್ನು ಪಕ್ಷಾತೀತವಾಗಿ ನಾವು ಜವಾಬ್ದಾರಿಯಿಂದ ಕೈಗೊಂಡಿದ್ದೇವೆ. ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ದೂರುವವರಿದ್ದು, ಆದರೆ ಜನರಿಗೆ ನೆರವಾಗುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ಅರ್ಜಿ ಎಲ್ಲಿ ಪಡೆಯಬೇಕು? ಅರ್ಜಿಗಳನ್ನು ಆನ್ ಲೈನ್ ಮೂಲಕ, ಸೇವಾ ಕೇಂದ್ರಗಳಲ್ಲಿ, ಹೋಬಳಿ ಮಟ್ಟದಲ್ಲಿ ತೆರೆಯಲಾಗಿರುವ Facilitation Centre ಗಳಲ್ಲಿ ಪಡೆಯುವ ಅವಕಾಶ ಕಲ್ಪಿಸಲಾಗಿದೆ. ನನ್ನ ಮತ್ತು ಉಪಮುಖ್ಯಮಂತ್ರಿಗಳ ಭಾವಚಿತ್ರವಿರುವ ಪ್ರಮಾಣ ಪತ್ರವನ್ನು ಪಡೆಯಬಹುದಾಗಿದೆ. BLO ಗಳು ನೀಡುವ ಅರ್ಜಿಗಳನ್ನ ಭರ್ತಿ ಮಾಡಿ ಅವರಿಗೆ ತಲುಪಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಕಳೆದುಕೊಂಡರೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಾರೆ. 5 ಗ್ಯಾರಂಟಿಗಳ ಜೊತೆ ಭೂಮಿ ಗ್ಯಾರಂಟಿಯನ್ನೂ ನೀಡುತ್ತಿದ್ದು, ಇದರ ಜೊತೆಗೆ ರಾಜ್ಯದಲ್ಲಿ ವಿಶೇಷ ಆಂದೋಲನವನ್ನು ಸರ್ಕಾರ ಕೈಗೊಂಡು ಮತದಾನದ ಗ್ಯಾರಂಟಿಯನ್ನು ಜಾರಿಗೊಳಿಸಿದ್ದೇವೆ ಎಂದರು. ಜನರ ಬದುಕು, ಗುರುತು ಬಹಳ ಮುಖ್ಯ. ಗುರುತಿದ್ದಲ್ಲಿ ಬದುಕು ಇದೆ. ಅದರಲ್ಲಿ ಶಕ್ತಿ ಇದ್ದು, ಮುಂದಿನ ದಿನಗಳಲ್ಲಿ ಅವರ ನಾಯಕರನ್ನು ಆಯ್ಕೆ ಮಾಡಿಕೊಳ್ಳಲು ಇದು ಅತ್ಯಗತ್ಯ. ಜನರ ಬದುಕಿಗೆ ನೇರವಾಗಿ ಸಹಾಯ ಮಾಡುವುದು ಹಾಗೂ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಆಡಳಿತ ವ್ಯವಸ್ಥೆಯಲ್ಲಿಯೇ ಕರ್ನಾಟಕ ಸರ್ಕಾರ ಕೈಗೊಂಡಿರುವ ಐತಿಹಾಸಿಕ ಹೆಜ್ಜೆ ಇದಾಗಿದೆ ಎಂದು ಸಿಎಂ ತಿಳಿಸಿದರು. ಅಭಿಯಾನದ ಮೂಲಕ ಜನರ ಸೌಲಭ್ಯಗಳನ್ನು ನೇರವಾಗಿ ಮನೆಬಾಗಿಲಿಗೆ ತಲುಪಿಸಲಾಗುತ್ತಿದೆ. ಸರ್ಕಾರ ಮತ್ತು ಜನರ ನಡುವಿನ ಅಂತರ ನಿವಾರಣೆಯಾಗಬೇಕು ಎನ್ನುವ ದೃಷ್ಟಿಯಿಂದ ಹಾಗೂ ಜನರು ಸರ್ಕಾರಿ ಕಚೇರಿಗಳಿಗೆ ಅಲೆಯಬಾರದು ಎಂಬ ದೃಷ್ಟಿಯಿಂದ ಈ ಕಾರ್ಯವನ್ನು ಕೈಗೊಂಡಿದೆ. ಈ ಸೌಲಭ್ಯವನ್ನ ಜನರಿಗೆ ತಲುಪಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ಗ್ರಾಮ ಲೆಕ್ಕಿಗರು ಸೇರಿದಂತೆ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರ ಶ್ರಮ ಅಭಿನಂದನೀಯ ಎಂದು ಮುಖ್ಯಮಂತ್ರಿಗಳು ಜನರು ಶಾಶ್ವತ ಸಾಕ್ಷಿ ಪತ್ರವನ್ನು ಉಳಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಶಾಸಕಾಂಗದಲ್ಲಿ ನಿಯಮಗಳನ್ನ ರೂಪಿಸಿದರೂ, ಅದನ್ನು ಕಾರ್ಯಾಂಗ ನಿಷ್ಠೆಯಿಂದ ಅನುಷ್ಠಾನಗೊಳಿಸಿದಾಗ ಮಾತ್ರ ಸರ್ಕಾರದ ಉದ್ದೇಶ ಸಾರ್ಥಕವಾಗುತ್ತದೆ ಎಂದರು.