ಬಿಪಿಎಲ್ | ಆದಾಯ ಮಿತಿ ₹3 ಲಕ್ಷಕ್ಕೆ ಏರಿಕೆ: ಆಹಾರ ಸಚಿವ ಕೆ.ಎಚ್. ಮುನಿಯಪ್ಪ
ಬೆಂಗಳೂರು: ‘ಬಿಪಿಎಲ್ ಕಾರ್ಡ್ ಪಡೆಯಲು ರಾಜ್ಯ ಸರ್ಕಾರ ನಿಗದಿಪಡಿಸಿದ್ದ ₹1.20 ಲಕ್ಷ ವಾರ್ಷಿಕ ಆದಾಯದ ಮಿತಿಯನ್ನು ಆಡಳಿತ ಸುದಾರಣೆ ಆಯೋಗದ ಶಿಫಾರಸಿನಂತೆ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರ ಅಧ್ಯಕ್ಷತೆಯಲ್

ಬೆಂಗಳೂರು: ‘ಬಿಪಿಎಲ್ ಕಾರ್ಡ್ ಪಡೆಯಲು ರಾಜ್ಯ ಸರ್ಕಾರ ನಿಗದಿಪಡಿಸಿದ್ದ ₹1.20 ಲಕ್ಷ ವಾರ್ಷಿಕ ಆದಾಯದ ಮಿತಿಯನ್ನು ಆಡಳಿತ ಸುದಾರಣೆ ಆಯೋಗದ ಶಿಫಾರಸಿನಂತೆ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯ ನಂತರ ಈ ಕುರಿತು ಅವರು ಮಾಹಿತಿ ನೀಡಿದರು.‘ಕೇಂದ್ರ ಸರ್ಕಾರದ ಮಾನದಂಡಗಳ ಅನ್ವಯ ಪಡಿತರ ಕಾರ್ಡ್ಗಳ ಪರಿಶೀಲನಾ ಕಾರ್ಯ ನಡೆಯುತ್ತಿದೆ. ಯಾವ ಕಾರ್ಡನ್ನೂ ರದ್ದು ಮಾಡುವುದಿಲ್ಲ. ಎಪಿಎಲ್ಗೆ ವರ್ಗಾಯಿಸುತ್ತೇವೆ. ಆದಾಯ ಮಿತಿ ಏರಿಕೆ ಜಾರಿಯಾದ ನಂತರ ಅಂತಹ ಫಲಾನುಭವಿಗಳು ಮತ್ತೆ ಬಿಪಿಎಲ್ ಕಾರ್ಡ್ ಪಡೆಯಬಹುದು’ ಎಂದರು.‘ಇಂದಿರಾ ಕಿಟ್ ವಿತರಣೆಯ ಟೆಂಡರ್ ಅಂತಿಮ ಹಂತದಲ್ಲಿದ್ದು, ಮುಂದಿನ ಎರಡು ತಿಂಗಳಲ್ಲಿ ಕಿಟ್ ವಿತರಿಸಲಾಗುವುದು. ಅದಕ್ಕಾಗಿ ₹6,000 ಕೋಟಿ ವ್ಯಯಿಸಲಾಗುತ್ತಿದೆ. ಅನ್ನಭಾಗ್ಯ ಯೋಜನೆ ಅಡಿ ರಾಜ್ಯದ ಸುಮಾರು 4.42 ಕೋಟಿ ಫಲಾನುಭವಿಗಳಿಗೆ ತಲಾ 10 ಕೆ.ಜಿ ಧಾನ್ಯ ವಿತರಣೆ ಮಾಡುತ್ತಿದ್ದೇವೆ. ಕಾನೂನು ಮಾಪನಶಾಸ್ತ್ರ ಇಲಾಖೆಯ ಮೂಲಕ ತೂಕ ಮತ್ತು ಅಳತೆಯ ತಪಾಸಣೆ ಮಾಡಲು 33 ವಾಹನಗಳನ್ನು ಇಲಾಖೆಗೆ ಹಂಚಿಕೆ ಮಾಡಲಾಗಿದೆ. ಕಳೆದ ಮೂರು ವರ್ಷದಲ್ಲಿ ಸುಮಾರು ₹250 ಕೋಟಿ ರಾಜಸ್ವ ಸಂಗ್ರಹ ಮಾಡಲಾಗಿದೆ’ ಎಂದು ವಿವರ ನೀಡಿದರು.‘ನ್ಯಾಯಬೆಲೆ ಅಂಗಡಿಗಳನ್ನು ಬೆಳಿಗ್ಗೆ 6ರಿಂದ ರಾತ್ರಿ 10ರವರೆಗೂ ತೆರೆದು ಪಡಿತರ ವಿತರಿಸಲು ಸೂಚಿಸಲಾಗಿದ್ದು, ತಪ್ಪಿದಲ್ಲಿ ಇಲಾಖೆಯ ಸಹಾಯವಾಣಿ ಸಂಖ್ಯೆ 1967ಕ್ಕೆ ಕರೆ ಮಾಡಿ ದೂರು ನೀಡಬಹುದು’ ಎಂದರು.ಗೋದಾಮುಗಳಿಗೆ ಸಿಸಿಟಿವಿ ಕ್ಯಾಮೆರಾ‘ಪಡಿತರ ಪದಾರ್ಥಗಳು ಕಾಳಸಂತೆಯಲ್ಲಿ ಮಾರಾಟವಾಗುವುದನ್ನು ತಡೆಯಲು ಎಲ್ಲ ಗೋದಾಮುಗಳಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲು, ಪಡಿತರ ಸಾಗಣೆ ವಾಹನಗಳಿಗೆ ಜಿಪಿಎಸ್ ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ’ ಎಂದು ಮುನಿಯಪ್ಪ ಹೇಳಿದರು.‘ಕಾಳಸಂತೆಯಲ್ಲಿ ಮಾರಾಟಮಾಡುತ್ತಿದ್ದ 1,497 ಪ್ರಕರಣಗಳನ್ನು ಪತ್ತೆ ಮಾಡಿ, ಎಫ್ಐಆರ್ ದಾಖಲಿಸಲಾಗಿದೆ. ₹50 ಕೋಟಿ ಪಡಿತರ ವಶಪಡಿಸಿಕೊಳ್ಳಲಾಗಿದೆ. ಈಗ ಸಿಸಿಟಿವಿ ಕ್ಯಾಮೆರಾ, ಜಿಪಿಎಸ್ ಅಳವಡಿಸಲಾಗುತ್ತಿದೆ. ನಿರಂತರ ನಿಗಾವಹಿಸಲು ಕೇಂದ್ರ ಕಚೇರಿಯಲ್ಲಿ ನಿಯಂತ್ರಣ ಕೊಠಡಿ ತೆರೆಯಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.ನ್ಯಾಯಬೆಲೆ ಅಂಗಡಿಗಳಲ್ಲಿ ರೇವಣ್ಣ ಭಾವಚಿತ್ರರಾಜ್ಯದ 20,259 ನ್ಯಾಯಬೆಲೆ ಅಂಗಡಿಗಳಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಆಹಾರ ಸಚಿವ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರ ಭಾವಚಿತ್ರ ಅಳವಡಿಸಲಾಗುವುದು ಎಂದು ಸಚಿವ ಮುನಿಯಪ್ಪ ಹೇಳಿದರು.ಡಿ.ಕೆ.ಶಿವಕುಮಾರ್, ಜಿ.ಪರಮೇಶ್ವರ, ಎಚ್.ಎಂ.ರೇವಣ್ಣ ಅವರ ಭಾವಚಿತ್ರದ ಜತೆಗೆ ಅವರ ದೂರವಾಣಿ ಸಂಖ್ಯೆಯನ್ನು ಅಳವಡಿಸುವ ಕುರಿತು ಚರ್ಚೆ ನಡೆದಿದೆ. ಗ್ರಾಹಕರು ಕರೆ ಮಾಡಿ, ಸಮಸ್ಯೆ ಹೇಳಬಹುದು, ಸಲಹೆ ನೀಡಬಹುದು ಎಂದರು.