1 ಕೋಟಿ ದೇಣಿಗೆ, ಉಚಿತ ಕಾನೂನು ನೆರವು – ಸಿಜೆಪಿ ಪ್ರತಿಭಟನಾಕಾರರ ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್
ನವದೆಹಲಿ: ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗೆ ಕಾನೂನು ಬೆಂಬಲ ನೀಡುತ್ತೇನೆ ಮತ್ತು ಕಾನೂನು ಹೋರಾಟದ ನಿಧಿಗಾಗಿ 1 ಕೋಟಿ ರೂ. ದೇಣಿಗೆ ನೀಡುವುದಾಗಿ ಸುಪ್ರೀಂ ಕೋರ್ಟ್ (Suupreme Court) ಹಿರಿಯ ವಕೀಲ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ (Kapil Sibal) ಘೋಷಿಸಿದ್ದಾರೆ. ಸಿಜೆಪಿ ವಕ್ತಾರ ಸೌರವ್ ದಾಸ್(Saurav Das) ಅವರೊಂದಿಗೆ ನಡೆಸಿದ ಜಂಟ

ನವದೆಹಲಿ: ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗೆ ಕಾನೂನು ಬೆಂಬಲ ನೀಡುತ್ತೇನೆ ಮತ್ತು ಕಾನೂನು ಹೋರಾಟದ ನಿಧಿಗಾಗಿ 1 ಕೋಟಿ ರೂ. ದೇಣಿಗೆ ನೀಡುವುದಾಗಿ ಸುಪ್ರೀಂ ಕೋರ್ಟ್ (Suupreme Court) ಹಿರಿಯ ವಕೀಲ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ (Kapil Sibal) ಘೋಷಿಸಿದ್ದಾರೆ. ಸಿಜೆಪಿ ವಕ್ತಾರ ಸೌರವ್ ದಾಸ್(Saurav Das) ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಕಿರುಕುಳ ನೀಡುವುದನ್ನು ತಡೆಯಲು ಮತ್ತು ಅವರಿಗೆ ಅಗತ್ಯ ಕಾನೂನು ನೆರವು ನೀಡುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಎಥೆನಾಲ್ ಅಪಪ್ರಚಾರ| ಮೆಟಾ, ಇನ್ಫ್ಲುಯೆನ್ಸರ್ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಗಡ್ಕರಿ VIDEO | Delhi: Addressing a press conference along with CJP spokesperson Saurav Das, Independent Rajya Sabha MP and senior advocate Kapil Sibal says, “This CJP will create a framework to track what happened at which place, which student or protester was affected, and what action… pic.twitter.com/OoSbxfy9bx — Press Trust of India (@PTI_News) July 27, 2026 ಪ್ರತಿಭಟನಾಕಾರರ ಮೇಲೆ ಎಲ್ಲಿ, ಏನು ಕ್ರಮ ಜರುಗಿಸಲಾಗಿದೆ ಎಂಬುದನ್ನು ಟ್ರ್ಯಾಕ್ ಮಾಡಲು ಸಿಜೆಪಿ ಒಂದು ಬಲವಾದ ಚೌಕಟ್ಟನ್ನು ರೂಪಿಸಲಿದೆ. ಉಚಿತವಾಗಿ ಕಾನೂನು ನೆರವು ನೀಡಲು ಬಯಸುವ ವಕೀಲರು ತಮ್ಮ ಹೆಸರು, ಸ್ಥಳ ಹಾಗೂ ಸಹಾಯದ ವಿವರಗಳನ್ನು ನೋಂದಾಯಿಸಿಕೊಳ್ಳಲು ಪ್ರತ್ಯೇಕ ವೆಬ್ಸೈಟ್ ತೆರೆಯಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಪ್ರತಿಭಟನೆ ನಡೆಸಿದ ಮಾತ್ರಕ್ಕೆ ಲಾಠಿಚಾರ್ಜ್ ಮಾಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ ಎಲ್ಲೆಲ್ಲಿ ಕಾನೂನನ್ನು ದುರುಪಯೋಗಪಡಿಸಿಕೊಂಡು ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ಸುಳ್ಳು ಕೇಸುಗಳನ್ನು ಹಾಕಲಾಗುತ್ತದೆಯೋ, ಅಲ್ಲೆಲ್ಲಾ ನಾವು ಅವರ ಪರವಾಗಿ ನಿಲ್ಲುತ್ತೇವೆ. ದೇಶಾದ್ಯಂತ ನಮ್ಮ ವಕೀಲರು ಅವರಿಗೆ ಬೆಂಬಲ ನೀಡಲಿದ್ದಾರೆ. ನಾನು ಈ ನಿಧಿಗೆ 1 ಕೋಟಿ ರೂಪಾಯಿ ನೀಡುತ್ತಿದ್ದು, ದೇಶದ ಇತರ ವಕೀಲರು ಹಾಗೂ ಸಾರ್ವಜನಿಕರು ಸಹ ದೇಣಿಗೆ ನೀಡಬೇಕಾಗಿ ವಿನಂತಿಸುತ್ತೇನೆ ಎಂದು ಕಪಿಲ್ ಸಿಬಲ್ ಮನವಿ ಮಾಡಿದರು. VIDEO | Delhi: Addressing a press conference along with independent Rajya Sabha MP and senior advocate Kapil Sibal, CJP spokesperson Saurav Das says, “We were in constant touch with Kapil ji and had sought legal guidance. When we called off the protest on the 25th, we apprehended… pic.twitter.com/88xwbSm9LO — Press Trust of India (@PTI_News) July 27, 2026 ಸಿಜೆಪಿ ವಕ್ತಾರ ಸೌರವ್ ದಾಸ್ ಮಾತನಾಡಿ, ಪ್ರತಿಭಟನೆ ಹಂತ ಹಂತವಾಗಿ ಶಮನಗೊಂಡ ನಂತರ ಸರ್ಕಾರವು ಪ್ರತ್ಯೇಕವಾಗಿ ವ್ಯಕ್ತಿಗಳನ್ನು ಗುರಿಮಾಡಿ ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುವ ಸಾಧ್ಯತೆಯಿದೆ. ಈ ಹಿಂದಿನ ಪ್ರಮುಖ ಪ್ರತಿಭಟನೆಗಳಲ್ಲೂ ಸರ್ಕಾರ ಇದೇ ‘ಪ್ಲೇಬುಕ್’ ಬಳಸಿದ್ದನ್ನು ನಾವು ನೋಡಿದ್ದೇವೆ. ಹೀಗಾಗಿ, ನಾವು ಮೊದಲಿನಿಂದಲೂ ಕಪಿಲ್ ಸಿಬಲ್ ಅವರೊಂದಿಗೆ ಸಂಪರ್ಕದಲ್ಲಿದ್ದು, ಅಗತ್ಯ ಕಾನೂನು ಮಾರ್ಗದರ್ಶನ ಪಡೆಯುತ್ತಿದ್ದೇವೆ. ಈ ಯುವಜನರ ಚಳವಳಿಯನ್ನು ರಾಜಕೀಯ ಪ್ರೇರಿತ ಪಿಐಎಲ್ಗಳಾಗಲಿ ಅಥವಾ ಸಮಾಜಘಾತುಕ ಶಕ್ತಿಗಳಾಗಲಿ ಹಳಿ ತಪ್ಪಿಸದಂತೆ ತಡೆಯುವುದು ನಮ್ಮ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.