ಅನಾರೋಗ್ಯಕ್ಕೆ ಒಳಗಾದ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ
ಛತ್ರಪತಿ ಸಂಭಾಜಿನಗರ: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರು ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿರುವ ನಿವಾಸದಲ್ಲಿ ಅನಾರೋಗ್ಯಕ್ಕೆ ಈಡಾಗಿದ್ದಾರೆ. ಆಗಸ್ಟ್ 1 ರಂದು ಬೆಳಗ್ಗೆ ಅಭಿಜಿತ್ ಅವರು ತಮ್ಮ ನಿವಾಸದ ಬಳಿ ಬಂದಿದ್ದ ಜನರನ್ನು ಭೇಟಿ ಮಾಡಿ ಮಾತನಾಡಿಸುತ್ತಿದ್ದರು. ಆ ವೇಳೆ ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ. ಆ ಕ

ಛತ್ರಪತಿ ಸಂಭಾಜಿನಗರ: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರು ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿರುವ ನಿವಾಸದಲ್ಲಿ ಅನಾರೋಗ್ಯಕ್ಕೆ ಈಡಾಗಿದ್ದಾರೆ. ಆಗಸ್ಟ್ 1 ರಂದು ಬೆಳಗ್ಗೆ ಅಭಿಜಿತ್ ಅವರು ತಮ್ಮ ನಿವಾಸದ ಬಳಿ ಬಂದಿದ್ದ ಜನರನ್ನು ಭೇಟಿ ಮಾಡಿ ಮಾತನಾಡಿಸುತ್ತಿದ್ದರು. ಆ ವೇಳೆ ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ. ಆ ಕೂಡಲೇ ಅವರನ್ನು ಅವರ ತಂದೆ ಭಗವಾನ್ ದೀಪ್ಕೆ ಆಸ್ಪತ್ರೆಗೆ ದಾಖಲಿಸಲಾಗಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ವೇಳೆ ಟೈಪಾಯ್ಡ್ಗೆ ಒಳಗಾಗಿದ್ದ ಬಗ್ಗೆ ಹೇಳಿಕೊಂಡಿದ್ದರು.ಈ ಕುರಿತು ಅವರು ಜುಲೈ25 ರಂದು ವಿಡಿಯೊ ಸಂದೇಶವನ್ನು ಹಂಚಿಕೊಂಡಿದ್ದ ಅಭಿಜಿತ್, ‘ಕಳೆದ ಕೆಲವು ದಿನಗಳಿಂದ ನನ್ನ ಆರೋಗ್ಯ ಸರಿಯಿರಲಿಲ್ಲ. ಈಗ ರಕ್ತ ಪರೀಕ್ಷೆಯ ವರದಿಗಳು ಬಂದಿದ್ದು, ನನಗೆ ಟೈಪಾಯ್ಡ್ ಇರುವುದು ದೃಢಪಟ್ಟಿದ್ದು, ಚಿಕಿತ್ಸೆ ನಡೆಯುತ್ತಿದೆ. ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಐವಿ (IV) ಡ್ರಿಪ್ಗಳನ್ನು ನೀಡಲಾಗುತ್ತಿದೆ’ ಎಂದಿದ್ದರು.
Read the complete story at Prajavani