ಗೌರವದ ಬಗ್ಗೆ ಉಪದೇಶ ನೀಡುವ ಮೊದಲು ತಮ್ಮ ಹೇಳಿಕೆ ನೆನಪಿಸಿಕೊಳ್ಳಬೇಕು – ಕಂಗನಾ ರಣಾವತ್ ವಿರುದ್ಧ ರಮ್ಯಾ ಕಿಡಿ
ನವದೆಹಲಿ: ಗೌರವದ ಬಗ್ಗೆ ಉಪದೇಶ ನೀಡುವ ಮೊದಲು ತಮ್ಮ ಹಿಂದಿನ ಹೇಳಿಕೆ ನೆನಪಿಸಿಕೊಳ್ಳಬೇಕು ಎಂದು ಸಂಸದೆ, ನಟಿ ಕಂಗನಾ ರಣಾವತ್ (Kangana Ranaut) ವಿರುದ್ಧ ಮಾಜಿ ಸಂಸದೆ, ನಟಿ ರಮ್ಯಾ (Actress Ramya) ಕಿಡಿಕಾರಿದ್ದಾರೆ. ದೆಹಲಿಯಲ್ಲಿ ಉಗ್ರ ಪ್ರತಿಭಟನೆ ನಡೆಸಿದ ಜೆನ್-ಝಿಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ ಕಂಗನಾ ವಿರುದ್ಧ ನಟಿ ರಮ್ಯಾ ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯ

ನವದೆಹಲಿ: ಗೌರವದ ಬಗ್ಗೆ ಉಪದೇಶ ನೀಡುವ ಮೊದಲು ತಮ್ಮ ಹಿಂದಿನ ಹೇಳಿಕೆ ನೆನಪಿಸಿಕೊಳ್ಳಬೇಕು ಎಂದು ಸಂಸದೆ, ನಟಿ ಕಂಗನಾ ರಣಾವತ್ (Kangana Ranaut) ವಿರುದ್ಧ ಮಾಜಿ ಸಂಸದೆ, ನಟಿ ರಮ್ಯಾ (Actress Ramya) ಕಿಡಿಕಾರಿದ್ದಾರೆ. ದೆಹಲಿಯಲ್ಲಿ ಉಗ್ರ ಪ್ರತಿಭಟನೆ ನಡೆಸಿದ ಜೆನ್-ಝಿಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ ಕಂಗನಾ ವಿರುದ್ಧ ನಟಿ ರಮ್ಯಾ ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೌರವದ ಬಗ್ಗೆ ಉಪದೇಶ ನೀಡುವ ಮೊದಲು ತಮ್ಮ ಹಿಂದಿನ ಹೇಳಿಕೆಗಳನ್ನು ನೆನಪಿಸಿಕೊಳ್ಳಬೇಕು. 2026ರ ಪ್ರಮುಖ ಹೈಲೈಟ್ ಎಂದರೆ ಕಂಗನಾ ರಣಾವತ್ ಜೆನ್-ಝೀಗೆ ಗೌರವದ ಬಗ್ಗೆ ಪಾಠ ಮಾಡಿರುವುದು. ಕೆಲವರಿಗೆ ಮೋದಿ ದೇವರಂತಿದ್ದಾರೆ, ಹೀಗಾಗಿ ಅವರ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ಅವರು ಹೇಳುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಸಮಂತಾ ಪ್ರೆಗ್ನೆನ್ಸಿ ಗ್ಲೋ ನೋಡಿ ನೆಟ್ಟಿಗರು ಫಿದಾ ಇದೇ ವೇಳೆ ರಾಮಮಂದಿರದ ವಿಚಾರವನ್ನೂ ಪ್ರಸ್ತಾಪಿಸಿರುವ ರಮ್ಯಾ, ರಾಮ ನನ್ನ ಪಾಲಿಗೆ ಭಗವಂತ. ಒಬ್ಬ ಹಿಂದೂವಾಗಿ ರಾಮಮಂದಿರದ ವಿಚಾರದಲ್ಲಿ ನನ್ನ ಧಾರ್ಮಿಕ ಭಾವನೆಗಳಿಗೆ ನೋವಾಗಿದೆ. ಅದಕ್ಕೆ ಎಲ್ಲಿದೆ ಆಕ್ರೋಶ? ಎಂದು ಪ್ರಶ್ನಿಸುವ ಮೂಲಕ ಕಂಗನಾ ಅವರ ದ್ವಂದ್ವ ನಿಲುವಿನ ಬಗ್ಗೆ ಕಿಡಿಕಾರಿದ್ದಾರೆ. ಮತ್ತೊಂದ್ಕಡೆ, ಕಂಗನಾ ಎಕ್ಸ್ನಲ್ಲಿ ಹೊಸ ಪೋಸ್ಟ್ ಮಾಡಿದ್ದು, ನಾನೀಗ ಜಾಗೃತ ಹಿಂದೂ ಆಗಬೇಕು. ಏಕೆಂದರೆ, ಮುಸ್ಲಿಮರನ್ನು ಭೇಟಿಯಾಗುವ ಹಿಂದೂಗಳು ಎಡಪಂಥೀಯರಾಗ್ತಿದ್ದಾರೆ ಅಂದಿದ್ದಾರೆ. ಇದು ಜೆನ್-ಝೀಗಳ ಬಗ್ಗೆ ದನಿ ಎತ್ತಿರುವ ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾಗೆ ಹೇಳಿರುವ ಮಾತು ಅಂತ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ ಆಗ್ತಿದೆ.ಇದನ್ನೂ ಓದಿ: ಬ್ರೇಕಪ್ ವದಂತಿಗೆ ಪ್ರತಿಕ್ರಿಯೆ ಕೊಟ್ಟ ಅನುಪಮಾ ಪರಮೇಶ್ವರನ್