ಪಾರದರ್ಶಕತೆ, ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆಯತ್ತ ಗಮನ ಹರಿಸಿ: ಪ್ರಹ್ಲಾದ್ ಜೋಶಿ
– ಶಿಕ್ಷಣ-ಆಹಾರ ಇಲಾಖೆ ಅಧಿಕಾರಿಗಳಿಗೆ ಸಚಿವ ಪ್ರಹ್ಲಾದ್ ಜೋಶಿ ನಿರ್ದೇಶನ – ಭಾನುವಾರವೂ ಇಲಾಖಾ ಕಾರ್ಯದರ್ಶಿ, ಉನ್ನತ ಅಧಿಕಾರಿಗಳೊಂದಿಗೆ ಸಭೆ ನವದೆಹಲಿ: ಪ್ರತಿಯೊಬ್ಬ ವಿದ್ಯಾರ್ಥಿಯೂ ಮಹತ್ವಾಕಾಂಕ್ಷೆ ಹೊಂದಿರುತ್ತಾನೆ. ಅವರ ಆಶಯಗಳನ್ನು ಪೂರೈಸುವ ನಿಟ್ಟಿನಲ್ಲಿ ಅತ್ಯಂತ ಪಾರದರ್ಶಕ ಮತ್ತು ವಿಶ್ವಾಸಾರ್ಹ ಪರೀಕ್ಷಾ ಪರಿಸರ ವ್ಯವಸ್ಥೆ ನಿರ್ಮಿಸುವತ್ತ ಆದ್ಯ ಗಮನ ಹರಿಸಬೇ

– ಶಿಕ್ಷಣ-ಆಹಾರ ಇಲಾಖೆ ಅಧಿಕಾರಿಗಳಿಗೆ ಸಚಿವ ಪ್ರಹ್ಲಾದ್ ಜೋಶಿ ನಿರ್ದೇಶನ – ಭಾನುವಾರವೂ ಇಲಾಖಾ ಕಾರ್ಯದರ್ಶಿ, ಉನ್ನತ ಅಧಿಕಾರಿಗಳೊಂದಿಗೆ ಸಭೆ ನವದೆಹಲಿ: ಪ್ರತಿಯೊಬ್ಬ ವಿದ್ಯಾರ್ಥಿಯೂ ಮಹತ್ವಾಕಾಂಕ್ಷೆ ಹೊಂದಿರುತ್ತಾನೆ. ಅವರ ಆಶಯಗಳನ್ನು ಪೂರೈಸುವ ನಿಟ್ಟಿನಲ್ಲಿ ಅತ್ಯಂತ ಪಾರದರ್ಶಕ ಮತ್ತು ವಿಶ್ವಾಸಾರ್ಹ ಪರೀಕ್ಷಾ ಪರಿಸರ ವ್ಯವಸ್ಥೆ ನಿರ್ಮಿಸುವತ್ತ ಆದ್ಯ ಗಮನ ಹರಿಸಬೇಕಿದೆ ಎಂದು ಕೇಂದ್ರದ ಶಿಕ್ಷಣ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ (Pralhad Joshi) ನಿರ್ದೇಶನ ನೀಡಿದರು. ಭಾನುವಾರ ಉಭಯ ಇಲಾಖೆಗಳ ಕಾರ್ಯದರ್ಶಿಗಳು ಮತ್ತು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ದೆಹಲಿಯಲ್ಲಿ ಭಾನುವಾರ ಬೆಳಗ್ಗೆ ಶಿಕ್ಷಣ ಸಚಿವಾಲಯದ ಕಾರ್ಯದರ್ಶಿ ಮತ್ತು ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರೀಕ್ಷಾ ಪಾರದರ್ಶಕತೆ ಕುರಿತು ಮಹತ್ವದ ಚರ್ಚೆ ನಡೆಸಿದರಲ್ಲದೆ, ಶೈಕ್ಷಣಿಕವಾಗಿ ಪಾರದರ್ಶಕ ಮತ್ತು ವಿಶ್ವಾಸಾರ್ಹ ಪರೀಕ್ಷಾ ಪರಿಸರ ವ್ಯವಸ್ಥೆಗೆ ಗಮನ ಹರಿಸಬೇಕೆಂದು ನಿರ್ದೇಶನ ನೀಡಿದರು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA)ಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆ ನಡೆಸಿದರು. ಪರೀಕ್ಷಾ ವಿಧ ಮತ್ತು ಸಾಂಸ್ಥಿಕ ಕಾರ್ಯ ವಿಧಾನಗಳನ್ನು ಮತ್ತಷ್ಟು ಬಲಪಡಿಸಲು ಹಾಗೂ ಪ್ರಕ್ರಿಯೆಗಳನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಸೂಚನೆ ನೀಡಿದರು. ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಗಳು ಎದುರಾಗದಂತೆ ಸ್ಪಂದಿಸುವ ನಿಟ್ಟಿನಲ್ಲಿ ಮುಂದಿನ ಹಂತಗಳ ಕುರಿತು ಮಹತ್ವದ ಚರ್ಚೆ ನಡೆಸಲಾಯಿತು. ಪ್ರತಿಯೊಬ್ಬ ವಿದ್ಯಾರ್ಥಿಯೂ ಮಹತ್ವಾಕಾಂಕ್ಷೆ ಹೊಂದಿರುತ್ತಾನೆ. ಅವರ ಆಶಯಗಳನ್ನು ಪೂರೈಸುವ ನಿಟ್ಟಿನಲ್ಲಿ ಅತ್ಯಂತ ಪಾರದರ್ಶಕ ಮತ್ತು ವಿಶ್ವಾಸಾರ್ಹ ಪರೀಕ್ಷಾ ಪರಿಸರ ವ್ಯವಸ್ಥೆ ನಿರ್ಮಿಸುವತ್ತ ಆದ್ಯ ಗಮನ ಹರಿಸಬೇಕಿದೆ ಎಂದು ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ಇದನ್ನೂ ಓದಿ: ಕೋಳಿ ಮಾಂಸ ತ್ಯಾಜ್ಯ ವಿಲೇವಾರಿಗೆ ಕೆಜಿಗೆ 5 ರೂ. ನಿಗದಿ – ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ವಿರೋಧ ಪ್ರಧಾನಿ ನರೇಂದ್ರ ಮೋದಿ ಅವರ ಅಗತ್ಯ ಮಾರ್ಗದರ್ಶನ, ಸಲಹೆಯಂತೆ ಯಾವ ವಿದ್ಯಾರ್ಥಿಗೂ ಅನ್ಯಾಯವಾಗದಂತೆ ಶೈಕ್ಷಣಿಕ ಸುಧಾರಣಾ ಕ್ರಮಗಳನ್ನು ಮತ್ತಷ್ಟು ಬಲಪಡಿಸಲು ಗಮನಹರಿಸಿ ಎಂದು ಹೇಳಿದರು. ಸಕ್ಕರೆ ದಾಸ್ತಾನು ಪರಿಶೀಲನಾ ಸಭೆ: ಶಿಕ್ಷಣ ಸಚಿವಾಲಯದ ಅಧಿಕಾರಿಗಳ ಸಭೆ ನಡೆಸಿದ ಬೆನ್ನಲ್ಲೇ ಸಚಿವ ಪ್ರಹ್ಲಾದ್ ಜೋಶಿ ಅವರು ಆಹಾರ ಇಲಾಖೆ ಅಧಿಕಾರಿಗಳ ಸಭೆ ಸಹ ನಡೆಸಿ, ಸಕ್ಕರೆ ದಾಸ್ತಾನು ಬಗ್ಗೆ ಪರಿಶೀಲನೆ ನಡೆಸಿದರು. ಹಬ್ಬಗಳಲ್ಲಿ ಸಕ್ಕರೆ ದಾಸ್ತಾನು ನಿಗಾ ವಹಿಸಿ: ಪ್ರಸ್ತುತ ಸಕ್ಕರೆ ದಾಸ್ತಾನು ಸ್ಥಿತಿ, ಉತ್ಪಾದನಾ ಮಟ್ಟ ಮತ್ತು ಪ್ರಸ್ತುತ ಸೀಸನ್ನಲ್ಲಿ ಸಕ್ಕರೆ ಬೇಡಿಕೆ, ಪೂರೈಕೆ ಬಗ್ಗೆ ನಿಗಾ ವಹಿಸಿದರು. ಆಹಾರ ಇಲಾಖೆ ಕಾರ್ಯದರ್ಶಿ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದ ಸಚಿವರು, ಶ್ರಾವಣ ಮಾಸ ಮತ್ತು ಹಬ್ಬಗಳ ಸೀಸನ್ ಶುರುವಾಗಿದ್ದರಿಂದ ಸಕ್ಕರೆ ಲಭ್ಯತೆ ಮೇಲೆ ನಿಕಟ ಮೇಲ್ವಿಚಾರಣೆ ನಡೆಸುವಂತೆ ಸಲಹೆ ನೀಡಿದರು. ಸಾಕಾಷ್ಟು ಸಕ್ಕರೆ ದಾಸ್ತಾನು ನಿರ್ವಹಣೆ ಮತ್ತು ಸ್ಥಿರ ಪೂರೈಕೆ ಹಾಗೂ ಬೆಲೆ ಸ್ಥಿರತೆಗೆ ಅನ್ವಯಿಸಿ ಸಕಾಲಿಕವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇದನ್ನೂ ಓದಿ: ಕೊಡಗಿನ ಅಬ್ಬೆ ಫಾಲ್ಸ್ಗೆ ಜೀವ ಕಳೆ – ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿರುವ ಜಲಧಾರೆ ಕಂಡು ಪ್ರವಾಸಿಗರು ಖುಷ್