Typhoon Dolphin | ಕೇರಳಕ್ಕೆ ಆರೆಂಜ್ ಅಲರ್ಟ್ ಘೋಷಣೆ, ದಕ್ಷಿಣ ಕರ್ನಾಟಕದಲ್ಲೂ ಭಾರೀ ಮಳೆ
ತಿರುವನಂತಪುರಂ: ಕೇರಳ (Kerala) ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ (Heavy Rain) ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಗುರುವಾರ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್(Orange Alert) ಘೋಷಿಸಿದೆ. ಪಶ್ಚಿಮ ಪೆಸಿಫಿಕ್ ಸಾಗರದಲ್ಲಿ ಸೃಷ್ಟಿಯಾಗಿರುವ ಡಾಲ್ಫಿನ್ ಚಂಡಮಾರುತದ(Typhoon Dolphin) ಪರೋಕ್ಷ ಪ್ರಭಾವದಿಂದಾಗಿ ಶನಿವಾರದವರೆಗ

ತಿರುವನಂತಪುರಂ: ಕೇರಳ (Kerala) ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ (Heavy Rain) ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಗುರುವಾರ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್(Orange Alert) ಘೋಷಿಸಿದೆ. ಪಶ್ಚಿಮ ಪೆಸಿಫಿಕ್ ಸಾಗರದಲ್ಲಿ ಸೃಷ್ಟಿಯಾಗಿರುವ ಡಾಲ್ಫಿನ್ ಚಂಡಮಾರುತದ(Typhoon Dolphin) ಪರೋಕ್ಷ ಪ್ರಭಾವದಿಂದಾಗಿ ಶನಿವಾರದವರೆಗೆ ನೈರುತ್ಯ ಮಾನ್ಸೂನ್ ಮಾರುತಗಳು ಮತ್ತಷ್ಟು ಬಲಗೊಳ್ಳಲಿವೆ. ಕೇರಳ ಮಾತ್ರವಲ್ಲದೇ ದಕ್ಷಿಣ ಕರ್ನಾಟಕ, ದಕ್ಷಿಣ ತಮಿಳುನಾಡು, ಪುದುಚೇರಿ, ಬಂಗಾಳ ಕೊಲ್ಲಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಆಗಸ್ಟ್ ಮೊದಲ 5 ದಿನಗಳಲ್ಲೇ ಕೇರಳವು ಈ ತಿಂಗಳ ವಾಡಿಕೆ ಮಳೆಯ ಅರ್ಧದಷ್ಟು ಪ್ರಮಾಣವನ್ನು ಸ್ವೀಕರಿಸಿದೆ. IMD ನೀಡಿರುವ ಅಂಕಿ-ಅಂಶಗಳ ಪ್ರಕಾರ, ಆಗಸ್ಟ್ 1 ರಿಂದ 5 ರ ನಡುವೆ ಕೇರಳದಲ್ಲಿ 226 ಮಿ.ಮೀ ಮಳೆಯಾಗಿದೆ. ಈ ಅವಧಿಯ ವಾಡಿಕೆ ಮಳೆ 90.6 ಮಿ.ಮೀ ಮಾತ್ರ. ಅಂದರೆ ಶೇ. 149 ರಷ್ಟು ಹೆಚ್ಚುವರಿ ಮಳೆಯಾಗಿದೆ. ಇದರಿಂದಾಗಿ ಹಲವು ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆಯನ್ನು ಹೆಚ್ಚಿಸಲಾಗಿದ್ದು, ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಕುರಿತು ಮಾತನಾಡಿದ IMD ನಿರ್ದೇಶಕಿ ನೀತಾ ಕೆ. ಗೋಪಾಲ್, “ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಭೂಮಿಯು ಈಗಾಗಲೇ ತೇವಾಂಶದಿಂದ ಕೂಡಿದ್ದು ಸಂಪೂರ್ಣವಾಗಿ ನೆನೆದಿದೆ. ಹಲವೆಡೆ ಸಣ್ಣಪುಟ್ಟ ಭೂಕುಸಿತಗಳು ವರದಿಯಾಗಿವೆ. ಈಗ ಮತ್ತೆ ಸುರಿಯುವ ಭಾರಿ ಮಳೆಯು, ವಿಶೇಷವಾಗಿ ಗುಡ್ಡಗಾಡು ಪ್ರದೇಶಗಳಲ್ಲಿ ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಬಹುದು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಡೆಲಿವರಿ ಬಾಯ್ನಿಂದ ಕಿರುಕುಳ ಆರೋಪ – ಮೊಬೈಲ್ ನಂಬರ್ ಕೊಡುವಂತೆ ಒತ್ತಾಯ, ವಿಡಿಯೋ ಹಂಚಿಕೊಂಡ ಯುವತಿ ಹವಾಮಾನ ತಜ್ಞರ ಪ್ರಕಾರ, ತಮಿಳುನಾಡು, ಕರ್ನಾಟಕ ಮತ್ತು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಸುಳಿಗಾಳಿ ಹಾಗೂ ಟೈಫೂನ್ ‘ಡಾಲ್ಫಿನ್’ ನ ಪರೋಕ್ಷ ಪ್ರಭಾವದಿಂದ ಮಳೆ ತೀವ್ರಗೊಂಡಿದೆ. ಟೈಫೂನ್ ಡಾಲ್ಫಿನ್ ನೇರವಾಗಿ ಕೇರಳದ ಮೇಲೆ ಪ್ರಭಾವ ಬೀರದಿದ್ದರೂ, ಅರೇಬಿಯನ್ ಸಮುದ್ರದಿಂದ ತೇವಾಂಶಭರಿತ ಮಾರುತಗಳನ್ನು ಕೇರಳ ಕರಾವಳಿಯತ್ತ ತಳ್ಳುತ್ತಿದ್ದು, ಗುರುವಾರ, ಶುಕ್ರವಾರ ಮತ್ತು ಶನಿವಾರ ಮಳೆ ಹೆಚ್ಚಾಗಲಿದೆ ಎಂದು ತಿಳಿಸಿದ್ದಾರೆ. ಆಗಸ್ಟ್ 8 ರ ನಂತರ ಇಷ್ಟೊಂದು ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿಲ್ಲ ಹಾಗೂ ‘ಎಲ್ ನಿನೋ’ ಪ್ರಭಾವವು ಮಾನ್ಸೂನ್ನ ಮುಂದಿನ ಅವಧಿಗೆ ಸವಾಲಾಗಬಹುದು ಎಂದು IMD ಅಂದಾಜಿಸಿದೆ. ಪರಿಸ್ಥಿತಿಯನ್ನು ಎದುರಿಸಲು ರಾಜ್ಯ ದುರಂತ ನಿರ್ವಹಣಾ ಪ್ರಾಧಿಕಾರ (KSDMA) ಸಂಪೂರ್ಣ ಸಜ್ಜಾಗಿದೆ. ರಾಜ್ಯಾದ್ಯಂತ ಅಗತ್ಯವಿರುವ ಕಡೆಗಳಲ್ಲಿ ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ. ಜಿಲ್ಲಾಡಳಿತಗಳಿಗೆ ಹೈ ಅಲರ್ಟ್ನಲ್ಲಿರಲು ಸೂಚಿಸಲಾಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(NDRF) 12 ತಂಡಗಳನ್ನು ನಿಯೋಜಿಸಲಾಗಿದೆ. ಪರಿಸ್ಥಿತಿಯನ್ನು 24 ಗಂಟೆಯೂ ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ.